India Languages, asked by sunithahonajegowda, 5 months ago

ಅಂಗಳ ತದ್ಭವ ರೂಪ ಬರೆಯಿರಿ​

Answers

Answered by radhikahans14082006
2

Answer:

You have written this....

Write a form of courtyard

Explanation:

ಸಂಸ್ಕೃತದಿಂದ ತಮ್ಮ ಮೂಲರೂಪವನ್ನು ವ್ಯತ್ಯಾಸಮಾಡಿಕೊಂಡು ಕನ್ನಡಕ್ಕೆ ಬಂದ ಶಬ್ದಗಳು

ಇದರಲ್ಲಿ ಅಲ್ಪಸ್ವಲ್ಪ ಬದಲಾವಣೆ ಹೊಂದಿದವು, ಹೆಚ್ಚು ಬದಲಾವಣೆ ಹೊಂದಿದವು ಎಂದು ಎರಡು ಭಾಗ ಮಾಡಬಹುದು.

(i) ಅಲ್ಪಸ್ವಲ್ಪ ಬದಲಾವಣೆ ಹೊಂದಿ ಬಂದವುಗಳು:

ಉದಾಹರಣೆಗೆ:- ಸೀತೆ, ಲಕ್ಷ್ಮಿ, ಮಾಲೆ, ದೇವತೆ, ರಾಜ, ಮಹ, ಯಶ, ಬೃಹತ್ತು, ಮಹತ್ತು, ವಿಪತ್ತು, ವಿಯತ್ತು, ಸರಿತ್ತು-ಇತ್ಯಾದಿಗಳು.

(ii) ಹೆಚ್ಚು ಬದಲಾವಣೆ ಹೊಂದಿ ಬಂದವುಗಳು:

ಉದಾಹರಣೆಗೆ:- ಸಕ್ಕರೆ, ಸಾವಿರ, ಬಸವ, ಸಂತೆ, ಪಟಕ, ಸರ, ತಾಣ, ದೀವಿಗೆ, ಬತ್ತಿ, ಬಸದಿ, ನಿಚ್ಚ, ಕಜ್ಜ, ಅಂಚೆ, ಕಂತೆ, ಅಜ್ಜ, ಕವಳ-ಇತ್ಯಾದಿಗಳು.

ಸಂಸ್ಕೃತದಿಂದ ಅಸಂಖ್ಯಾತ ಪದಗಳು ಕನ್ನಡಕ್ಕೆ ತದ್ಭವ ರೂಪವಾಗಿ ಬಂದಿರುವುದರಿಂದ, ಅವುಗಳು ಕನ್ನಡಕ್ಕೆ ಬಂದ ಕ್ರಮವನ್ನು ವಿಸ್ತಾರವಾಗಿಯೇ ತಿಳಿಯಬೇಕಾದುದು ಅವಶ್ಯವಾದುದು. ಆ ಬಗೆಗೆ ಈಗ ವಿಚಾರ ಮಾಡೋಣ.

[1] ಸಂಸ್ಕೃತ ಭಾಷೆಯಿಂದ ಕನ್ನಡಕ್ಕೆ ಬಂದ ಶಬ್ದಗಳನ್ನು ತಿಳಿಯಲು ಸ್ಥೂಲವಾಗಿ ಕೆಳಗಣ ವಿಷಯಗಳನ್ನು ನೆನಪಿನಲ್ಲಿಡಬೇಕು:-

(i) ಋ, ಶ, ಷ, ಕ್ಷ, ಜ್ಞ, ತ್ರ ವಿಸರ್ಗ, ಸ್ತ್ರೀ, ಸ್ತ್ರ ಅಕ್ಷರಗಳಿರುವ ಶಬ್ದಗಳು;

(ii) ಮಹಾಭಾರತ, ರಾಮಾಯಣಗಳೇ ಮೊದಲಾದ ಪುರಾಣ ಗ್ರಂಥಗಳಲ್ಲಿ ಬರುವ ವ್ಯಕ್ತಿ, ಸ್ಥಳ, ಪರ‍್ವತ, ನದಿ, ಋಷಿಗಳೇ ಮೊದಲಾದವರ ಹೆಸರುಗಳು ಮತ್ತು ಋತು, ಮಾಸ, ದಿವಸ, ನಕ್ಷತ್ರ, ಯೋಗ, ಕರಣಗಳು;

(iii) ವಿ, ಅ, ಅನ್, ಸು, ಸ, ನಿಸ್, ನಿರ್, ನಿಃ, ದುಃ, ದುಸ್, ದುರ್ ಇತ್ಯಾದಿ ಉಪಸರ್ಗ ಪೂರ್ವಕ ಶಬ್ದಗಳು, ಉದಾ:-ವಿಚಲಿತ, ಅಚಲಿತ, ದುರಾಚಾರ, ಅನಗತ್ಯ, ವಿಶೇಷ … … … ಇತ್ಯಾದಿ;

(iv) ಇವಲ್ಲದೆ ಇನ್ನೂ ಅನೇಕ ಶಬ್ದಗಳಿವೆ. ಇಲ್ಲಿ ಹೇಳಿರುವುದು ಕೇವಲ ಸ್ಥೂಲಮಾತ್ರ.

[2] ಅನೇಕ ಶಬ್ದಗಳು ತದ್ಭವ ರೂಪ ಹೊಂದಿ ನೇರವಾಗಿ ಸಂಸ್ಕೃತದಿಂದಲೇ ಬಂದಿಲ್ಲ. ಪ್ರಾಕೃತ ಎಂಬ ಭಾಷೆಯಿಂದಲೂ ಬಂದಿವೆ.

(೨೭) ತತ್ಸಮಗಳು-ಸಂಸ್ಕೃತದಿಂದ ವಿಕಾರ ಹೊಂದದೆ ಕನ್ನಡದಲ್ಲಿ ಬಳಸಲ್ಪಡುವ ಶಬ್ದಗಳು ತತ್ಸಮಗಳು. ತತ್ ಎಂದರೆ ಅದಕ್ಕೆ, ಸಮ ಎಂದರೆ ಸಮಾನವಾದುದು-ಇಲ್ಲಿ ಅದಕ್ಕೆ ಎಂದರೆ ಸಂಸ್ಕೃತಕ್ಕೆ ಸಮಾನ (ಎಂದು ಅರ್ಥ) ಇವನ್ನು ಕೆಲವರು ಸಮಸಂಸ್ಕೃತ ಗಳೆಂದೂ ಕರೆಯುವರು (ಕನ್ನಡಕ್ಕೂ ಸಂಸ್ಕೃತಕ್ಕೂ ಇವು ಸಮಾನರೂಪಗಳೆಂದು ತಾತ್ಪರ್ಯ). ಅಲ್ಲದೆ ತದ್ಭವ ಶಬ್ದಗಳ ಸಂಸ್ಕೃತ ರೂಪಗಳನ್ನು ತತ್ಸಮ ಗಳೆಂದೇ ಕರೆಯುವುದು ರೂಢಿಗೆ ಬಂದಿದೆ.

ಉದಾಹರಣೆಗೆ:- ರಾಮ, ಭೀಮ, ಕಾಮ, ವಸಂತ, ಸೋಮ, ಚಂದ್ರ, ಸೂರ‍್ಯ, ಗ್ರಹ, ಕರ್ತೃ, ಶತ್ರು, ಸ್ತ್ರೀ, ಶ್ರೀ, ವನ, ಮಧು, ಕಮಲ, ಭುವನ, ಭವನ, ಶಯನ, ಶ್ರುತಿ, ಸ್ಮೃತಿ, ಶುದ್ಧಿ, ಸಿದ್ಧಿ, ಕವಿ, ಕಾವ್ಯ, ರವಿ, ಗಿರಿ, ಲಿಪಿ, ಪಶು, ಶಿಶು, ರಿಪು, ಭಾನು, ಯತಿ, ಮತಿ, ಪತಿ, ಗತಿ-ಇತ್ಯಾದಿ.

(೨೮) ಸಂಸ್ಕೃತದಿಂದ ಕನ್ನಡಕ್ಕೆ ಬರುವಾಗ ಅಲ್ಪಸ್ವಲ್ಪ ವಿಕಾರವನ್ನಾಗಲಿ, ಪೂರ್ಣ ವಿಕಾರವನ್ನಾಗಲಿ, ಹೊಂದಿ ಬಂದಿರುವ ಶಬ್ದಗಳನ್ನು ತದ್ಭವಗಳೆಂದು ಕರೆಯುವರು (ತತ್ ಎಂದರೆ ಅದರಿಂದ ಎಂದರೆ ಸಂಸ್ಕೃತದಿಂದ ಭವ ಎಂದರೆ ಹುಟ್ಟಿದ ಅಥವಾ ನಿಷ್ಪನ್ನವಾದ ಎಂದು ಅರ್ಥ).

(ಅಲ್ಪಸ್ವಲ್ಪ ವಿಕಾರ ಹೊಂದಿದ ಶಬ್ದಗಳನ್ನು ಸಮಸಂಸ್ಕೃತ ಎಂದು ಕರೆಯುವುದೂ ವಾಡಿಕೆ)

ಉದಾಹರಣೆಗೆ:- ಮಾಲೆ, ಸೀತೆ, ಉಮೆ, ವೀಣೆ, ಅಜ್ಜ, ಬಂಜೆ, ಸಿರಿ, ಬಾವಿ, ದನಿ, ಜವನಿಕೆ, ನಿದ್ದೆ, ಗಂಟೆ, ಜೋಗಿ, ರಾಯ, ಕೀಲಾರ, ಪಟಕ, ಸಂತೆ, ಪಕ್ಕ, ಪಕ್ಕಿ, ಚಿತ್ತಾರ, ಬಟ್ಟ, ಆಸೆ, ಕತ್ತರಿ-ಇತ್ಯಾದಿ

Hope it helps you plzzz Mark my answer as brainlist and follow too.......

Similar questions