Math, asked by teju3824, 3 months ago

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.
೧. ಕುಣಿಗಲ್ ಕೆರೆಯು ಯಾವ ದಿಕ್ಕಿನಲ್ಲಿದೆ?​

Answers

Answered by rrr7397
6

ಕುಣಿಗಲ್ ತಾಲ್ಲೂಕಿನ ಇತಿಹಾಸವನ್ನು ಗಮನಿಸಿದಾಗ ಶಿಲಾಯುಗದ ನೆಲೆಗಳನ್ನು ಸಹ ನಾವು ಕಾಣಬಹುದಾಗಿದೆ.ಹುಲಿಯೂರುದುರ್ಗದ ಹೇಮಗಿರಿ ತಪ್ಪಲು, ತಿಪ್ಪಸಂದ್ರಗಳಲ್ಲಿ ಶಿಲಾಯುಗದ ಅವಶೇಷಗಳು ಕಾಣಬರುತ್ತವೆ. ಕುಣಿಗಲ್ ನಾಡಿನ ಕೆಲ ಭಾಗ ಕದಂಬರ ಆಳ್ವಿಕೆಗೂ ಸೇರಿರಬಹುದಾದ ಸಾಧ್ಯತೆಯನ್ನು ಎಸ್.ಶ್ರೀಕಂಠಶಾಸ್ತ್ರಿಯವರು ದಾಖಲಿಸಿದ್ದಾರೆ. ನಮಗೆ ನೇರವಾಗಿ ಆಳಿದ ಬಗ್ಗೆ ನಿಖರ ದಾಖಲೆಗಳು ಕಂಡುಬರುವುದು ಗಂಗರ ಕಾಲದಿಂದ. ಗಂಗವಾಡಿ ೯೬೦೦೦ ಕ್ಕೆ ಒಳಪಡುವ ಪ್ರದೇಶದಲ್ಲಿ ಕುಣಿಗಲ್ ಸಹ ಒಂದು. ಗಂಗರ ಪ್ರಸಿದ್ಧನಾದ ದೊರೆಶ್ರೀಪುರುಷನು (ಕ್ರಿ.ಶ.೭೨೫-೭೮೮)ಕುಣಿಗಲ್ಲಿನ ಐತಿಹಾಸಿಕ ಪ್ರಸಿದ್ಧ ಕೆರೆ ದೊಡ್ಡಕೆರೆಯನ್ನು ಕ್ರಿ.ಶ.೮ನೇ ಶತಮಾನದ ಕೊನೆಯ ಭಾಗದಲ್ಲಿ ನಿರ್ಮಿಸಿದ ಬಗ್ಗೆ ನಂತರದ ಶಾಸನವೊಂದು ಉಲ್ಲೇಖಿಸುತ್ತದೆ.ಗಂಗರು ರಾಷ್ಟ್ರಕೂಟರಿಗೆ ಸೋತ ನಂತರ ಚಾಲುಕ್ಯ ಮಾಂಧಾತ ಎಂಬ ಸಾಮಂತನು ಕುಣಿಗಲ್ಲನ್ನು ಆಳುತ್ತಿದ್ದನು. ಆಗ ದೊಡ್ಡಕೆರೆಯು ಒಡೆದು ಹೋದಾಗ ಕ್ರಿ.ಶ.೯೬೩ರ ಸುಮಾರಿನಲ್ಲಿ ದುರಸ್ತಿ ಮಾಡಿಸುತ್ತಾನೆ. ನಂತರ ಬಂದ ರಾಷ್ಟ್ರಕೂಟ ಕಂಭರಾಯ ಎಂಬುವವನು ಕುಣಿಗಲ್ಲಿನಲ್ಲಿ ಒಂದು ಕೋಟೆಯನ್ನು ಸುಮಾರು ಕ್ರಿ.ಶ.೯೮೯ರಲ್ಲಿ ನಿರ್ಮಿಸುತ್ತಾನೆ.ಗಂಗರ ಹಾಗೂ ರಾಷ್ಟ್ರಕೂಟರ ಪತನಾನಂತರ ಕುಣಿಗಲ್ ಚೋಳರ ಆಳ್ವಿಕೆಗೆ ಒಳಪಡುತ್ತದೆ. 'ರಾಜೇಂದ್ರ ಚೋಳಪುರಂ' ಎಂದು ಕುಣಿಗಲ್ಲನ್ನು ಶಾಸನಗಳಲ್ಲಿ ಕರೆದಿದೆ. ನಂತರ ಕುಣಿಗಲ್ ಹೊಯ್ಸಳರ ಆಳ್ವಿಕೆಗೆ ಒಳಪಡುತ್ತದೆ. ಇವರ ಕಾಲದ ಸೋಮೇಶ್ವರ ದೇವಾಲಯ ಕೆರೆಯ ಏರಿಯ ಮೇಲೆ ಇರುವುದನ್ನು ಕಾಣಬಹುದು. ಹೊಯ್ಸಳರ ನಂತರ ವಿಜಯನಗರದ ಅರಸರ ಆಳ್ವಿಕೆಗೆ ಕುಣಿಗಲ್ ಒಳಪಟ್ಟ ಬಗ್ಗೆ ಶಾಸನಗಳಿಂದ ತಿಳಿಯಬಹುದು. ಬುಕ್ಕರಾಯನು ಕ್ರಿ.ಶ.೧೩೬೯ರ ಸುಮಾರಿನಲ್ಲಿ ಕುಣಿಗಲ್ ದೊಡ್ಡ ಕೆರೆಗೆ ಒಂದು ತೂಬನ್ನು ಮಾಡಿಸಿ ಶಾಸನವನ್ನು ಹಾಕಿಸಿದ್ದಾನೆ. ವಿಜಯನಗರದ ಸಾಮಂತನಾಗಿದ್ದ ತಮ್ಮೇಗೌಡನೆಂಬ ಸಾಮಂತನು ಕುಣಿಗಲ್ಲನ್ನು ಆಳಿದ ಬಗ್ಗೆ ಜಾನಪದ ಸಾಹಿತ್ಯದಿಂದ ತಿಳಿದುಬರುತ್ತದೆ. ನಂತರ ಇಮ್ಮಡಿ ಕೆಂಪೇಗೌಡ ಮತ್ತು ಮುಮ್ಮಡಿ ಕೆಂಪೇಗೌಡರ ಆಳ್ವಿಕೆಗೆ ಒಳಪಟ್ಟ ಬಗ್ಗೆ ತಿಳಿಯುತ್ತದೆ. ಹುಲಿಯೂರಿನಲ್ಲಿ ಕೆಂಪೇಗೌಡನು ಕ್ರಿ.ಶ.೧೫೮೦ರ ಸುಮಾರಿನಲ್ಲಿ ದುರ್ಗವನ್ನು ಕಟ್ಟುವ ಮೂಲಕ ಅದು ಹುಲಿಯೂರು ದುರ್ಗ ಎಂದಾಯಿತು. ಅದೇ ವೇಳೆಗೆ ಹುತ್ರಿದುರ್ಗದಲ್ಲಿ ಸಹ ಕೋಟೆಯೊಂದನ್ನು ನಿರ್ಮಿಸಿದರು. ಹೀಗಾಗಿ ಕೆಂಪೇಗೌಡನ ಆಳ್ವಿಕೆಗೆ ಈ ಪ್ರದೇಶ ಸೇರಿದ್ದ ಬಗ್ಗೆ ತಿಳಿಯುತ್ತದೆ. ಹಂದಲಗೆರೆ (ತಾವರೆಕೆರೆ ಪಂಚಾಯ್ತಿ)ಗ್ರಾಮದಲ್ಲಿನ ಅಪ್ರಕಟಿತ ಶಾಸನವೊಂದರಲ್ಲಿ (ಕಾಲ ಕ್ರಿ.ಶ.೧೬೬೩) ದತ್ತಿಯನ್ನು ಬಿಟ್ಟ ಬಗ್ಗೆ ತಿಳಿಯಬಹುದಾಗಿದೆ. ಶಾಸನ ಸಾಕಷ್ಟು ತೃಟಿತಗೊಂಡಿರುವುದರಿಂದ ಅದನ್ನು ಓದಲಾಗಿಲ್ಲ. ಕೆಂಪೇಗೌಡನ ನಾಟಕ ಶಾಲೆಯ ಶೃಂಗಾರಮ್ಮನು ಹುಲಿಯೂರುದುರ್ಗದ ಪಕ್ಕದಲ್ಲಿ 'ಶೃಂಗಾರ ಸಾಗರ' ಎಂಬ ಕೆರೆಯನ್ನು, ಅಗ್ರಹಾರವನ್ನು ನಿರ್ಮಿಸಿದ ಬಗ್ಗೆ ಶಾಸನಗಳು ತಿಳಿಸುತ್ತವೆ. ೧೬ನೇಶತಮಾನದಲ್ಲಿ ಶ್ರೀ ಸಿದ್ದಲಿಂಗೇಶ್ವರ ಯತಿಯವರು ತಪಸ್ಸನ್ನಾಚರಿಸಿ ಸಿದ್ದಿಯನ್ನು ಪಡೆದು, ಲೋಕ ಸಂಚಾರ ಕೈಗೊಂಡು, ಪವಾಡ ಮೆರೆದು, ಗದಗಿನ ಬಳಿಯ ಡಂಬಳದಲ್ಲಿ ಮಠವೊಂದನ್ನು ಸ್ಥಾಪಿಸಿ ಎಡೆಯೂರಿನಲ್ಲಿ ಶಿವೈಕ್ಯವಾದ ಬಗ್ಗೆ ಐತಿಹ್ಯವಿದೆ. ನಂತರ ಮೈಸೂರಿನ ಓಡೆಯರ್ ಹಾಗೂ ಹೈದರ್, ಟಿಪ್ಪು ಸಹ ಆಳಿದರು. ಇಲ್ಲಿನ ಅಶ್ವ ವರ್ಧನ ಶಾಲೆ(ಸ್ಟಡ್ ಫಾರ್ಮ್)ಯನ್ನು ಹೈದರ್ ಆಲಿಯು ಮೈಸೂರು ಸೇನೆಗೆ ಸೇರ್ಪಡೆಗೊಂಡ ಅರಬ್ಬಿ ಯುದ್ದಾಶ್ವಗಳ ಸಾಕಾಣಿಕೆ ಹಾಗೂ ವರ್ಧನೆಗಾಗಿ ಸ್ಥಾಪಿಸಿದನು.

ಕುಣಿಗಲ್ ಪಟ್ಟಣದ ಹೂವಾಡಿಗರ ಬೀದಿಯಲ್ಲಿ ಶ್ರೀ ಭೈರಾಗೀಶ್ವರ ಮಠವಿದ್ದು ಅವರು ಶತಮಾನಗಳ ಹಿಂದೆ ಜೀವಂತ ಸಮಾಧಿಯಾಗಿದ್ದು ಭಕ್ತರ ರಕ್ಷಣೆ ಮಾಡುತ್ತಿದ್ದಾರೆ.

Answered by Anonymous
10

Answer:

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಕುಣಿಗಲ್ ಕೆರೆಯು ಯಾವ ದಿಕ್ಕಿನಲ್ಲಿದೆ?

Step-by-step explanation:

Hope it helps you

Similar questions