India Languages, asked by bhuvanvaishu, 6 days ago

ಚಂದ್ರಶಖರ ಕಂಬಾರ ಅವರು ಕವಿ ಪರಿಚಯ​

Answers

Answered by bhuvaneshwariks81
1

Answer:

ಚಂದ್ರಶೇಖರ ಕಂಬಾರ

ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜಾನಪದ, ಅಧ್ಯಾಪನ, ಆಡಳಿತ ಹೀಗೆ ವಿವಿಧಮುಖೀ ವಿದ್ವಾಂಸರಾದ ಚಂದ್ರಶೇಖರ ಕಂಬಾರರು ಜನಿಸಿದ್ದು 1937 ಜನವರಿ 2ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ. ಅವರ ವಿದ್ಯಾಬ್ಯಾಸ ಗೋಕಾಕ್, ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಯಿತು. ಗೋಕಾಕ ಮತ್ತು ಬೆಳಗಾವಿಯ ಬ್ರಿಟಿಷರ ಭಯದ ನೆರಳು ಆವರಿಸಿದ್ದ ಪರಿಸರದಿಂದ ಲೇಖಕನಾಗಿ ಮೈಪಡೆದ ಕಂಬಾರರ ಬಾಲ್ಯದ ಆತಂಕಗಳು ಅವರ ಕೃತಿಗಳಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತವೆ. ಇವರ ಬಾಲ್ಯದ ವಸಾಹತು ಸಂದರ್ಭದ ಅನುಭವಗಳನ್ನು ‘ನನ್ನ ಬದುಕು-ಬರಹ’ ಎಂಬ ಲೇಖನದಲ್ಲಿ ಅವರೇ ಸೂಚಿಸಿದ್ದಾರೆ. ಅಂಥ ವಸಾಹತು ಸಂದರ್ಭದ ಸಂವೇದನೆಯುಳ್ಳ ಕಂಬಾರರು ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಬಂದು ಎಂ.ಎ ಮತ್ತು ಪಿ.ಎಚ್.ಡಿ ಪದವಿಗಳನ್ನು ಪಡೆದರು. ಅನಂತರ 1968ರಿಂದ 1969ರವರೆಗೆ ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿಯೂ, 1971ರಿಂದ 1991ರವರೆಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿಯೂ ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು. ನಂತರ 1992ರಿಂದ 1998ರವರೆಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮೊಟ್ಟಮೊದಲ ಕುಲಪತಿಗಳಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ.

ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿಯೂ, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿಯೂ, ಮೈಸೂರಿನ ಕರ್ನಾಟಕ ನಾಟಕ ರಂಗಾಯಣದ ಸದಸ್ಯರಾಗಿಯೂ, ದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ, ದೆಹಲಿಯ ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮ’ ಶಾಲೆಯ ಅಧ್ಯಕ್ಷರಾಗಿ ಹೀಗೆ ಅವರು ವಿವಿಧ ರಂಗಗಳಲ್ಲಿ ಸಮಸ್ತರಾಗಿ ಎಲ್ಲೆಲ್ಲಿಯೂ ಸಂದಿದ್ದಾರೆ.

ಕನ್ನಡದ ಮಹತ್ವದ ಕವಿಗಳು, ನಾಟಕಕಾರರು, ಜಾನಪದ ತಜ್ಞರು ಹಾಗೂ ಉತ್ತಮ ಆಡಳಿತಗಾರರಾದ ಕಂಬಾರರು ಸುಮಾರು ಇಪ್ಪತ್ತೈದು ನಾಟಕಗಳು, ಹತ್ತಕ್ಕೂ ಹೆಚ್ಚು ಕವನ ಸಂಕಲನಗಳು, ಮೂರು ಕಾದಂಬರಿಗಳು, ಹತ್ತಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ. ವಿಶ್ವದಾದ್ಯಂತ ಪ್ರಮುಖ ವೇದಿಕೆಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಮೂರು ಸಾವಿರ ಪುಟಗಳಿಗೂ ಅಧಿಕವಾದ ‘ಕನ್ನಡ ಜಾನಪದ ವಿಶ್ವಕೋಶ’ವನ್ನು ಸಂಪಾದಿಸಿದ್ದಾರೆ.

ಕಂಬಾರರ ಐದು ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಕಂಬಾರರ ‘ಜೋಕುಮಾರಸ್ವಾಮಿ’ ಭಾರತದ ಅತ್ಯುತ್ತಮ ನಾಟಕವೆಂದು ‘ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿ ಪಡೆದಿದೆ. ‘ಜೈ ಸಿದ್ಧ ನಾಯಕ’ ವರ್ಧಮಾನ್ ಪ್ರಶಸ್ತಿ ಪಡೆದಿದೆ. ‘ಸಾವಿರ ನೆರಳು’ ಕವನ ಸಂಕಲನ ಕೇರಳ ರಾಜ್ಯದ ‘ಆಶಾನ್’ ಪ್ರಶಸ್ತಿ ಪಡೆಯಿತು. ಕೆ.ವಿ. ಶಂಕರೇಗೌಡ ಪ್ರಶಸ್ತಿ, ಭಾರತ ನಾಟಕ ಆಕಡೆಮಿಯ ‘ಶ್ರೇಷ್ಠ ನಾಟಕಕಾರ’ ಪ್ರಶಸ್ತಿ, ಆಂಧ್ರ ಸರ್ಕಾರದ ‘ಅತ್ಯುತ್ತಮ ಕವಿ’ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಜಾನಪದ ಕ್ಷೇತ್ರ ಸಾಧನೆಗೆ ಹಲವು ಪ್ರಶಸ್ತಿ ಹೀಗೆ ಪ್ರಶಸ್ತಿಗಳ ಸುರಿಮಳೆ ಕಂಬಾರರಿಗೆ ದೊರೆತಿದೆ. ಇವೆಲ್ಲಕ್ಕೂ ಮಿಗಿಲಾಗಿ ಅವರಿಗೆ ಸಾಹಿತ್ಯದ ಮೇರುಪ್ರಶಸ್ತಿಯಾದ ‘ಜ್ಞಾನಪೀಠ’ ಸಂದಿದೆ.

ಸಾಹಿತ್ಯ, ಜಾನಪದ, ಸಂಗೀತ, ನಾಟಕ ಜೊತೆಗೆ ಸಿನಿಮಾದಲ್ಲಿ ಅಪಾರ ಸಾಧನೆ ಮಾಡಿದ್ದಾರೆ ಕಂಬಾರರು. ಇವರು 5 ಚಲನಚಿತ್ರಗಳನ್ನೂ, 8 ಸಾಕ್ಷಗಳನ್ನೂ ತಯಾರಿಸಿದ್ದಾರೆ. ಅನೇಕ ಚಲನಚಿತ್ರಗಳಿಗೆ ಹಾಗೂ ಸಾಕ್ಷಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಇವರ ‘ಕಾಡುಕುದುರೆ’ ಭಾರತೀಯ ಪನೋರಮವನ್ನು ಪ್ರವೇಶಿಸಿತು ಹಾಗೂ ಉತ್ತಮ ಹಿನ್ನಲೆ ಗಾಯನಕ್ಕಾಗಿ ರಾಷ್ಟ್ರಪ್ರಶಸ್ತಿಯನ್ನು ಪಡೆಯಿತು. 1981ರಲ್ಲಿ ‘ಸಂಗೀತಾ’ ಚಿತ್ರ ರಾಜ್ಯಪ್ರಶಸ್ತಿ ಪಡೆಯಿತು. ಸಂಭಾಷಣೆ, ನಿರ್ದೇಶನ, ಸಂಗೀತ ನಿರ್ದೇಶನ, ಉತ್ತಮ ಚಿತ್ರಕತೆ ಈ ಎಲ್ಲ ಪ್ರಶಸ್ತಿಗಳನ್ನೂ ಕಂಬಾರರು ಪಡೆದಿದ್ದಾರೆ. ಇನ್ನೂ ತುಂಬಾ ತುಂಬಾ ಇದೆ. ಹೇಳುತ್ತಾ ಹೋದರೆ, ಅದರಲ್ಲೇ ಲೇಖನ ತುಂಬಿ ಹೋದೀತು!

ಸುಮಾರು 1963ರಲ್ಲಿ ಹುಟ್ಟಿಕೊಂಡ ಕಂಬಾರರ ಕವಿತೆ ‘ಹೇಳತೇನ ಕೇಳ’ ಒಂದು ರೀತಿಯಲ್ಲಿ ತಮ್ಮ ಸಮಗ್ರ ಕಾವ್ಯವನ್ನು ಬಣ್ಣಿಸಿದಂತಿದೆ. ಒಂದು ಪ್ರತಿಭಾವಂತ ಸಂವೇದನೆ ಏನೆಲ್ಲಾ ಬಗೆಯಬಹುದೋ ಅದೆಲ್ಲವನ್ನೂ’ಹೇಳತೇನ ಕೇಳ’ ಪ್ರತಿಮೆ ತನ್ನಲ್ಲಿರಿಸಿಕೊಂಡಿರುವುದರಿಂದಲೇ ಕಂಬಾರರು ಮತ್ತೆ ಮತ್ತೆ ಪುರಾಣಗಳನ್ನು ಹೆಕ್ಕಿ ಮರು ಸೃಷ್ಟಿಗೆ ತೊಡಗುತ್ತಾರೆ. ‘ಋಷ್ಯಶೃಂಗ’, ‘ಹುಲಿಯ ನೆರಳು’ ನಾಟಕಗಳಲ್ಲೂ ‘ಕರಿಮಾಯಿ’ ಕಾದಂಬರಿಯಲ್ಲೂ ಇದೇ ಪುರಾಣ ಮತ್ತೂ ಬೇರೆಯದೇ ಆದ ಆಯಾಮಗಳ ವಿಶ್ಲೇಷಣೆ ಇದೆ. ‘ಹೇಳತೇನ ಕೇಳ’ದಲ್ಲಿ ಅತ್ಯಂತ ಅಮೂರ್ತವಾದ ವಸಾಹತು ಸಂಸ್ಕೃತಿ ತಂದ ಸಂಕೀರ್ಣವಾದ ಬದುಕಿನ ನೋವುಗಳನ್ನು ವ್ಯಕ್ತಪಡಿಸಲು ಕಂಬಾರರು ಗಟ್ಟಿದನಿಯಲ್ಲಿ ಹಾಡುವ ಜಾನಪದ ಲಾವಣಿಯ ಮಾಧ್ಯಮವನ್ನು ಅಭಿವ್ಯಕ್ತಿಗೆ ಶೋಧಿಸಿಕೊಂಡಿರುವುದು ಕವಿತೆ ಹೊರಡಿಸುವ ಒಟ್ಟು ಧ್ವನಿ ಪರಂಪರೆಗೆ ಅನನ್ಯತೆಯನ್ನು ಒದಗಿಸಿಕೊಟ್ಟಿದೆ

ಆಧುನಿಕ ನಾಗರೀಕ ಪ್ರಪಂಚವು ಗ್ರಾಮದ ಸಹಜತೆಗಳನ್ನು ಇಲ್ಲವಾಗಿಸುವ ಹಾಗೂ ಹಳ್ಳಿಯ ಅನನ್ಯತೆಗಳ ಮೇಲೆ ಸವಾರಿ ಮಾಡುವ ಪ್ರಕ್ರಿಯೆಗಳನ್ನು ಕಂಬಾರರು ‘ಕರಿಮಾಯಿ’ ಕಾದಂಬರಿಯಲ್ಲಿ ಮುಖಾಮುಖಿಯಾಗಿಸಿದ್ದಾರೆ. ನಾಗರೀಕ ಪ್ರಪಂಚದ ಬಗೆಗಿನ ಆಕರ್ಷಣೆಗಳ ಮತ್ತು ಗ್ರಾಮದ ನೈಜತೆಗಳ ಮುಖಾಮುಖಿಯಿಂದ ಎದುರಾಗುವ ದ್ವಂದ್ವಗಳ ಪುರಾಣದಂತೆ ‘ಕರಿಮಾಯಿ’ ಕಾದಂಬರಿ ಕಾಣುತ್ತದೆ. ಈ ಬಗೆಯ ದ್ವಂದ್ವಗಳು ‘ಹುಲಿಯ ನೆರಳು’. ‘ನಾಯಿಕತೆ’, ‘ಋಷ್ಯಶೃಂಗ’ ನಾಟಕಗಳಲ್ಲಿ ಹಾಗೂ ಅವರ ಅನೇಕ ಕವಿತೆಗಳಲ್ಲಿ ಬೇರೆ ಬೇರೆ ಅಯಾಮಗಳಲ್ಲಿ ಮೈದಾಳುವ ಕ್ರಮವು ವಿಶಿಷ್ಟವಾಗಿದೆ.

ಕಂಬಾರರ ಕೃತಿಗಳ ಮತ್ತೊಂದು ಮುಖ್ಯ ನೆಲೆಯೆಂದರೆ ಜಮೀನ್ದಾರಿ ವ್ಯವಸ್ಥೆಯಲ್ಲಿ ಉಂಟಾಗುತ್ತಿರುವ ಒಡಕುಗಳನ್ನು ಕುರಿತ ಚಿಂತನೆ. ತನ್ನ ದರ್ಪ ಮತ್ತು ಅಹಂಕಾರಗಳಿಂದ ನಿರ್ಮಾಣಮಾಡುವ ಜಮೀನ್ದಾರಿ ವ್ಯವಸ್ಥೆಯ ಕ್ರೌರ್ಯ, ಅದರ ಪ್ರಭಾವ ಪರಿಣಾಮಗಳ ಸ್ವರೂಪವನ್ನು ‘ಜೋಕುಮಾರಸ್ವಾಮಿ’, ‘ನಾಯೀಕತೆ’, ‘ಜೈ ಸಿದ್ಧನಾಯಕ’ ಮೊದಲಾದ ಕೃತಿಗಳಲ್ಲಿ ವಿವೇಚಿಸುತ್ತಾರೆ.

Explanation:

5⭐️❤

Similar questions