India Languages, asked by chaitraboregowda123, 14 days ago

ಪರಿಸರ ರಕ್ಷಣೆ ಬಗ್ಗೆ ಪ್ರಬಂಧವನ್ನು ಮೂರು ಭಾಗವನ್ನಾಗಿ ಮಾಡಿ ಕಳುಹಿಸಿ​

Answers

Answered by Anonymous
4

Answer

ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ.

ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ. ಇದನ್ನು ಗುರುತಿಸಿ ,ಪರಿಸರ ವಿಘಟನೆಗೆ ಕಾರಣವಾಗುವ ಚಟುವಟಿಕೆಗಳ ಮೇಲೆ ನಿಗ್ರಹವನ್ನು ಸರ್ಕಾರಗಳು ಪ್ರಾರಂಭಿಸಿವೆ. 1960 ರ ದಶಕದಿಂದೀಚೆಗೆ, ಪರಿಸರ ಚಳವಳಿಗಳು, ವಿವಿಧ ಪರಿಸರದ ಸಮಸ್ಯೆಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿದೆ. ಮಾನವ ಚಟುವಟಿಕೆಯ ಪರಿಸರ ಪ್ರಭಾವದ ವ್ಯಾಪ್ತಿಯ ಬಗ್ಗೆ ಯಾವುದೇ ಒಪ್ಪಂದವಿಲ್ಲ ಮತ್ತು ವೈಜ್ಞಾನಿಕ ಅಪ್ರಾಮಾಣಿಕತೆಯೂ ಉಂಟಾಗುತ್ತದೆ. ಆದ್ದರಿಂದ ರಕ್ಷಣೆ ಕ್ರಮಗಳನ್ನು ಕೆಲವೊಮ್ಮೆ ಚರ್ಚಿಸಲಾಗುತ್ತದೆ.

ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ವಿಧಾನಗಳು

ಸ್ವಯಂಪ್ರೇರಿತ ಪರಿಸರ ಒಪ್ಪಂದಗಳು ಸಂಪಾದಿಸಿ

ಕೈಗಾರಿಕಾ ದೇಶಗಳಲ್ಲಿ, ಸ್ವಯಂಪ್ರೇರಿತ ಪರಿಸರ ಒಪ್ಪಂದಗಳು ಕಂಪೆನಿಗಳಿಗೆ ಕನಿಷ್ಟ ನಿಯಂತ್ರಕ ಮಾನದಂಡಗಳನ್ನು ಮೀರಿ ಸಾಗಲು ವೇದಿಕೆಯನ್ನು ಒದಗಿಸುತ್ತವೆ ಮತ್ತು ಇದರಿಂದಾಗಿ ಉತ್ತಮ ವಾತಾವರಣದ ಅಭ್ಯಾಸವನ್ನು ಬೆಂಬಲಿಸುತ್ತದೆ. ಉದಾಹರಣೆಗೆ, ಭಾರತದಲ್ಲಿ, ಎನ್ವಿರಾನ್ಮೆಂಟ್ ಇಂಪ್ರೂವ್ಮೆಂಟ್ ಟ್ರಸ್ಟ್ (ಇಐಟಿ) 1998 ರಿಂದ ಪರಿಸರ ಮತ್ತು ಅರಣ್ಯ ರಕ್ಷಣೆಗಾಗಿ ಕೆಲಸ ಮಾಡುತ್ತಿದೆ. ಗ್ರೀನ್ ಇಂಡಿಯಾ ಕ್ಲೀನ್ ಇಂಡಿಯಾ ಪರಿಕಲ್ಪನೆಯ ಒಂದು ಗುಂಪನ್ನು ಹಸಿರು ಸ್ವಯಂಸೇವಕರು ಪಡೆಯುತ್ತಾರೆ. ಸಿಎ ಗಜೇಂದ್ರ ಕುಮಾರ್ ಜೈನ್ (ಚಾರ್ಟರ್ಡ್ ಅಕೌಂಟೆಂಟ್), ಭಾರತದ ರಾಜಸ್ಥಾನದ ಒಂದು ಸಣ್ಣ ಹಳ್ಳಿಯಾದ,ಸೋಜಾತ್ ನಗರದಲ್ಲಿ ಪರಿಸರ ಸುಧಾರಣೆ ಟ್ರುಸ್ಟನ್ನು ಸಂಸ್ಥಾಪಿಸಿದ್ದರೆ. [] ಅಭಿವೃದ್ಧಿಶೀಲ ದೇಶಗಳಲ್ಲಿ, ಉದಾಹರಣೆಗೆ ಲ್ಯಾಟಿನ್ ಅಮೇರಿಕಾ, ಈ ಒಪ್ಪಂದಗಳನ್ನು ಸಾಮಾನ್ಯವಾಗಿ ಕಡ್ಡಾಯ ನಿಯಂತ್ರಣದೊಂದಿಗೆ ಜಾರಿಗೊಲಿಸಿದ್ದಾರೆ. [] ಈ ಒಪ್ಪಂದಗಳೊಂದಿಗೆ ಅಸ್ತಿತ್ವದಲ್ಲಿರುವ ಸವಾಲುಗಳೇನೆ೦ದರೆ ಬೇಸ್ಲೈನ್ ಡೇಟಾ, ಗುರಿಗಳು, ಮೇಲ್ವಿಚಾರಣೆ ಮತ್ತು ವರದಿ ಮಾಡುವುದು. ಪರಿಣಾಮಕಾರಿತ್ವದ ಮೌಲ್ಯಮಾಪನದಲ್ಲಿ ಅಂತರ್ಗತವಾಗಿರುವ ತೊಂದರೆಗಳ ಕಾರಣ, ಅವುಗಳ ಬಳಕೆಯು ಸಾಮಾನ್ಯವಾಗಿ ಪ್ರಶ್ನಿಸಲ್ಪಟ್ಟಿದೆ ಮತ್ತು ಪರಿಣಾಮವಾಗಿ, ಇಡೀ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾಗಿದೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಅವುಗಳ ಬಳಕೆಯ ಪ್ರಮುಖ ಅನುಕೂಲವೆಂದರೆ ಅವಪರಿಸರ ನಿರ್ವಹಣಾ ಸಾಮರ್ಥ್ಯವನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ಜಗತ್ತಿನೆಲ್ಲೆಡೆ ಪರಿಸರದ ಸಂರಕ್ಷಣೆಗಾಗಿ ಹಲವಾರು ವ್ಯಕ್ತಿಗಳು ವೈಯಕ್ತಿಕವಾಗಿ ಜಾಗೃತಿ ಮೂಡಿಸುತ್ತಿರುವುದು ಮತ್ತೊಂದು ಪ್ರಮುಖ ವಿಧಾನ. ಇಲ್ಲಿ ಸಂಘಟನೆ, ಒಪ್ಪಂದದಂತಹ ಯೋಜಿತ ನಡೆಯಿರುವುದಿಲ್ಲ. ವೈಯಕ್ತಿಕವಾಗಿ ಪ್ರಾಕೃತಿಕ ಸಂಪನ್ಮೂಲ ಮತ್ತು ಇತರ ವಸ್ತುವಿಷಯಗಳ ಕುರಿತು ಸಾಕಷ್ಟು ಪರಿಸರವಾದಿಗಳು ಜಾಗೃತಿ ಕೈಗೊಂಡಿದ್ದಾರೆ. ಆಫ್ರಿಕಾದ ವಾಂಗರಿ ಮಥಾಯ್ ಅವರಿಂದ ಮೊದಲ್ಗೊಂಡು ಇಂದಿನ ಗ್ರೇಟಾ ಥುನ್ಬರ್ಗ್ ಅವರವರೆಗೆ ಈ ವಿಧಾನ ಮುಂದುವರೆದಿದೆ. ಭಾರತದಲ್ಲಿ ಸುಂದರ್ ಲಾಲ್ ಬಹುಗುಣ, ರಾಜೇಂದ್ರಕುಮಾರ್, ಸಾಲುಮರದ ತಿಮ್ಮಕ್ಕ, ಕುಸುಮಾ ಸೊರಬ, ಶಿವರಾಮ ಕಾರಂತ ಅವರಿಂದ ಉರಗ ತಜ್ಞರು, ಪ್ರಾಣಿ ಸಂರಕ್ಷಕರಾದ ಉಲ್ಲಾಸ್ ಕಾರಂತ್, ಸ್ನೇಕ್ ಶ್ಯಾಮ್, ಸೂರ್ಯಕೀರ್ತಿ ಮೊದಲಾದವರು ಅಹರ್ನಿಶಿ ಶ್ರಮಿಸಿದ್ದಾರೆ.

ಪರಿಸರ ವ್ಯವಸ್ಥೆ ವಿಧಾನ ಸಂಪಾದಿಸಿ

ಒಂದು ಪರಿಸರ ಸಂಪನ್ಮೂಲ ನಿರ್ವಹಣೆ ಮತ್ತು ಪರಿಸರ ರಕ್ಷಣೆಯ ಗುರಿಯೆನೆಂದರೆ ಸಂಪೂರ್ಣ ಪರಿಸರ ವ್ಯವಸ್ಥೆಯ ಕಠಿಣ ಅಂತರ್ ಸಂಭಂದಗಳ ಬಗ್ಗೆ ನಿರ್ಣಯಗಳು ತೆಗೆದುಕೊಳ್ಳುವುದು. ಆದರ್ಶಪ್ರಾಯವಾಗಿ ಅಂತಹ ಒಂದು ವಿಧಾನದ ಅಡಿಯಲ್ಲಿ ನಿರ್ಧಾರ-ತೆಗೆದುಕೊಳ್ಳುವ ಪ್ರಕ್ರಿಯೆಗಳು ಯೋಜನಾ ಮತ್ತು ನಿರ್ಣಯಕ್ಕೆ ಸಹಕಾರಿ ವಿಧಾನವಾಗಿದ್ದು ಅದು ಎಲ್ಲಾ ಸರ್ಕಾರಿ ಇಲಾಖೆಗಳಾದ್ಯಂತ ವಿಶಾಲ ವ್ಯಾಪ್ತಿಯ ಪಾಲುದಾರಿಕೆಯನ್ನು ಒಳಗೊಂಡಿರುತ್ತದೆ. ಉದ್ಯಮ, ಪರಿಸರ ಗುಂಪುಗಳು ಮತ್ತು ಸಮುದಾಯದ ಪ್ರತಿನಿಧಿಗಳು ಕೂಡ ಇದರ ಭಗಿಯಗಿರುತ್ತರೆ. ಈ ವಿಧಾನವು ಮಾಹಿತಿಯ ಉತ್ತಮ ವಿನಿಮಯ, ಸಂಘರ್ಷ-ನಿರ್ಣಯ ಮತ್ತು ಉತ್ತಮವಾದ ಪ್ರಾದೇಶಿಕ ಸಂರಕ್ಷಣೆಯನ್ನು ಬೆಂಬಲಿಸುತ್ತದೆ. ಪರಿಸರದ ಸಂರಕ್ಷಣೆಯಲ್ಲಿ ಧರ್ಮಗಳು ಪ್ರಮುಖ ಪಾತ್ರ ವಹಿಸುತ್ತವ.

ಜಗತ್ತು ಮುಂದುವರೆಯುತ್ತಿದ್ದಂತೆ ಪರಿಸರದಲ್ಲಿ ಅಸಮತೋಲನವಾಗುತ್ತಿದೆ. ಇದು ವಿಷಾದದ ವಿಚಾರ. ಅದಕ್ಕಾಗಿ ಪರಿಸರದ ಸಂರಕ್ಷಣೆ ಹೇಗೆ? ಎಂಬುದನ್ನು ನಾವು ತಿಳಿದುಕೊಳ್ಳುವುದು ಬಹಳ ಅವಶ್ಯಕವಾಗಿರುತ್ತದೆ. ಇಲ್ಲವಾದಲ್ಲಿ ಮುಂದೆ ಎದುರಾಗುವ ಸಮಸ್ಯೆಗಳಿಗೆ ನಾವೇ ಕಾರಣೀಕರ್ತರು ಆಗಬೇಕಾಗುತ್ತದೆ.

Answered by Anonymous
3

Answer:

ಪರಿಸರ ಸಂರಕ್ಷಣೆ

ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಆದರೆ ಅದು ನಮ್ಮಿಂದ ಸಾಧ್ಯವಾಗದೆಹೋಗುತ್ತಿರುವುದು ಒಂದು ಶೋಚನೀಯ ಸಂಗತಿ. ಇಂದಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಮೂರು ಮುಖ್ಯವಾದ ಪರಿಸರ ಮಾಲಿನ್ಯಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ.

ಇವೆಲ್ಲವುಗಳಿಗೂ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ. ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನನಿತ್ಯ ಜೀವನಪದ್ಧತಿಯಿಂದ ಹಾಗೂ ಹೆಚ್ಚು ತ್ತಿರುವ ಕಾರ್ಖಾನೆಗಳಿಂದ ಹೊರಬಿಡುವ ಕಸ ಹಾಗೂ ತ್ಯಾಜ್ಯ ನೀರು ಇವುಗಳಿಂದ ವಾತಾವರಣವು ಮಾಲಿನ್ಯಗೊಳ್ಳುತ್ತದೆ. ವಾಹನಗಳಿಂದ, ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲವು ನಮ್ಮ ನಿತ್ಯ ಜೀವನದ ಮೇಲೆಯೇ ಪ್ರಭಾವ ಬೀರುತ್ತದೆ. ಮಾಲಿನ್ಯ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸುವುದೇ ಅಸಾಧ್ಯವಾಗುತ್ತದೆ. ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ. ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯಬೇಕಾದರೆ ಇಂದಿನಿಂದಲೇ ಒಳ‍್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.

ಜೂನ್ ತಿಂಗಳಿಗೆ ಒಂದು ವಿಶೇಷತೆ ಇದೆ. ಇದು ವಿಶ್ವ ಪರಿಸರ ದಿನಾಚರಣೆಯ ತಿಂಗಳು. ಇದು ನಾವು ನಮ್ಮ‌ ಪರಿಸರದ ಬಗ್ಗೆ ತಿಳಿಯುವ, ಮಹತ್ವವನ್ನು ಅರಿಯುವ ಹಾಗೂ ಈ ದಿನಗಳಲ್ಲಿ ನಮ್ಮ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದದ್ದನ್ನು ನೆನಪಿಸುವ ಮಹತ್ತರವಾದ ದಿನ. ನಾವು ಈ ಪರಿಸರದ ಶಿಶುಗಳು, ಪರಿಸರವಿಲ್ಲದೆ ನಮ್ಮ ಅಸ್ತಿತ್ವಕ್ಕೆ ಯಾವುದೇ ರೀತಿಯ ಬೆಲೆಯಿರುವುದಿಲ್ಲ. ಪುರಾಣ ಕಾಲದಿಂದಲೂ ರಾಜಕುವರರೂ ಋಷಿಗಳ ಆಶ್ರಮದಲ್ಲಿಯೇ ಇದ್ದುಕೊಂಡೇ ಈ ಸಹಜ ಪ್ರಕೃತಿಯ ಮಡಿಲಲ್ಲಿಯೇ ವಿದ್ಯೆ ಕಲಿತರು… ಪರಿಸರವನ್ನು ಕಾಪಾಡಿಕೊಳ್ಳುವುದರ ಮಹತ್ವವನ್ನು ಅರಿತರು. ಇಂದೂ ಕೂಡ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ, ಅನಿವಾರ್ಯತೆ ಎರಡೂ ಇದೆ.

ಮಾನವನು ಸಮಾಜಜೀವಿ ಎನ್ನುವಷ್ಟೇ ಸಹಜವಾದದ್ದು ಆತನು ಪರಿಸರದ ಶಿಶು ಎನ್ನುವುದು. ಅವನ ಸುತ್ತಮುತ್ತಲು ವೈವಿದ್ಯಮಯವಾದ ನಿಸರ್ಗದ ಸೊಬಗಿದೆ, ಹಲವಾರು ಮರಗಿಡಗಳಿವೆ. ವಿವಿಧ ಪ್ರಕಾರದ ಪ್ರಾಣಿಪಕ್ಷಿಗಳಿವೆ. ವೈವಿಧ್ಯಮಯವಾದ ಕೀಟ ಪ್ರಪಂಚವಿದೆ. ಅನೇಕ ಸೂಕ್ಷ್ಮ ಜೀವಿಗಳಿವೆ. ಅಷ್ಟೇ ಅಲ್ಲ. ಹಲವಾರು ಚಿಕ್ಕ ದೊಡ್ಡ ನದಿ, ಸಾಗರ ಸರೋವರಗಳಿವೆ. ಸಣ್ಣಪುಟ್ಟ ಗುಡ್ಡ ಬೆಟ್ಟಗಳಿವೆ, ದೊಡ್ಡ ದೊಡ್ಡ ಪರ್ವತ ಶಿಖರಗಳಿವೆ. ಗಾಳಿ, ಬೆಳಕು ಹಾಗು ಅಪರಿಮಿತ ಖನಿಜ ಸಂಪತ್ತಿದೆ.

ನಾವು ನಮ್ಮ ಈ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ , ವಿಜ್ಞಾನ, ತಂತ್ರಜ್ಞಾನದ‌ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಗೆ ಶರಣಾಗಿ ಅನೇಕ ರೀತಿಯಲ್ಲಿ ಇಂದು ಪರಿಸರಕ್ಕೆ ಅರಿತೋ ಅರಿಯದೆಯೋ ತೀವ್ರ ಹಾನಿಯನ್ನುಂಟು ಮಾಡುತ್ತಿದ್ದೇವೆ. ನಮ್ಮ ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದ್ದರೂ ನಾವು ಅದನ್ನು ನಗಣ್ಯ ಎಂಬಂತೆ ವರ್ತಿಸುತ್ತಿದ್ದೇವೆ. ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ಉದ್ದೇಶದಿಂದಲೇ 1972 ನೇ ಇಸವಿಯಿಂದ ಪ್ರತಿ ವರ್ಷ ಜೂನ್ 5 ರಂದು ಪರಿಸರ ದಿನಾಚರಣೆಯನ್ನು ಆಚರಿಸುತ್ತಬಂದಿದ್ದೇವೆ.

ಇತ್ತೀಚೆಗಂತೂ ವಿಸ್ತರಣೆ ಹೊಂದುತ್ತಿರುವ ರೈಲು ಮಾರ್ಗ, ವಾಹನಗಳಿಗಾಗಿ ರಚನೆಯಾಗುತ್ತಿರುವ ಚತುಷ್ಪಥ ರಸ್ತೆಗಳು, ದೊಡ್ಡ ದೊಡ್ಡ ಕಟ್ಟಡಗಳಿಗಾಗಿ ನಿರಂತರವಾಗಿ ಕಡಿದೆಸೆಯುತ್ತಿರುವ ವೃಕ್ಷ ಸಂಪತ್ತಿನಿಂದಾಗಿ ನದಿಗಳಿಗೆ ಅಡ್ಡಲಾಗಿ ಕಟ್ಟುತ್ತಿರುವ ಜಲಾಶಯಗಳು ಇತ್ಯಾದಿಗಳಿಂದಾಗಿ ಈ ಮಾಲಿನ್ಯ ಹೆಚ್ಚುತ್ತಿದ್ದು, ಹವಾಮಾನ ವೈಪರೀತ್ಯಗಳೂ ಉಂಟಾಗುತ್ತಿವೆ. ಅಲ್ಲದೆ, ಹೆಚ್ಚುತ್ತಿರುವ ಜನಸಂಖ್ಯೆ, ವಸತಿ ಸಮುಚ್ಚಯಗಳು, ಹೊಗೆಉಗುಳುವ ವಾಹನಗಳ ಸಂದಣಿ, ಪ್ಲಾಸ್ಟಿಕ್ ಸಾಮ್ರಾಜ್ಯ ಇತ್ಯಾದಿಗಳಿಂದಾಗಿ ನಮ್ಮ ಪರಿಸರವು ಹಾಳಾಗುತ್ತಿದೆ.

ನಾವು ನಮ್ಮ ಸ್ವಾರ್ಥಕ್ಕಾಗಿ ಮರಗಿಡಗಳನ್ನು ಕಡಿದುಹಾಕುತ್ತೇವೆ. ಇದರಿಂದಾಗಿ ಹಸಿರು ವಿರಳವಾಗುತ್ತಹೋಗುತ್ತಿದೆ. ಈಗಲೆ ಎಚ್ಚೆತ್ತುಕೊಳ್ಳದೆಹೋದರೆ ಈಗಾಗಲೇ ಸುನಾಮಿ, ಬರ, ಮಹಾಪೂರದಂಥ ಪ್ರಕೃತಿ ವಿಕೋಪಗಳಿಗೆ ತುತ್ತಾಗುತ್ತಿರುವುದರ ಜೊತೆಗೆ ಇನ್ನೂ ಅತ್ಯಂತ ದಾರುಣವಾದ ಆಮ್ಲಜನಕದ ಕೊರತೆಯನ್ನು ಕೂಡ ಅನುಭವಿಸಬೇಕಾದ ಪರಿಸ್ಥಿತಿ ಬರುತ್ತದೆ.

#ಕನ್ನಡತಿ ❤️

Similar questions