India Languages, asked by mrunalisawant3602, 10 months ago

5 points about apple in Kannada

Answers

Answered by Dreamgirl25161
2

"ದಿನಕ್ಕೊಂದು ಸೇಬು ವೈದ್ಯರನ್ನು ದೂರವಿಡುವುದು" ಈ ವಾಕ್ಯವನ್ನು ಚಿಕ್ಕಂದಿನಿಂದಲೂ ಕೇಳುತ್ತಲೇ ಬಂದಿದ್ದೇವೆ. ಬೇರೆಲ್ಲಾ ಹಣ್ಣುಗಳಿಗಿಂತ ಸೇಬಿನಲ್ಲಿರುವ ಪೋಷಕಾಂಶಗಳ ಆಗರವೇ ಇದಕ್ಕೆ ಕಾರಣ. ಪ್ರತಿದಿನ ಸೇಬು ಹಣ್ಣೊಂದನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಪ್ರಮಾಣದ ಪ್ರೋಟೀನುಗಳು, ವಿಟಮಿನ್ ಗಳು, ಆಂಟಿ ಆಕ್ಸಿಡೆಂಟುಗಳು ಹಾಗೂ ಮುಖ್ಯವಾಗಿ ವಿಟಮಿನ್ ಸಿ ಲಭ್ಯವಿರುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಂಡು ಬರುವ ಕಾರಣ ಸೇಬಿಗೆ ವೈದ್ಯರನ್ನು ದೂರ ಅಟ್ಟಿದ ಅತಿಶಯೋಕ್ತಿ ಲಭ್ಯವಾಗಿದೆ.

ಉತ್ತರ ಭಾರತದ, ಅದರಲ್ಲೂ ಹಿಮಾಚಲ ಪ್ರದೇಶದಲ್ಲಿ ಹೆಚ್ಚು ಬೆಳೆಯಲಾಗುವ ಸೇಬುಹಣ್ಣು ಹಿಂದೆ ದುಬಾರಿಯಾಗಿದ್ದ ಕಾರಣ ಶ್ರೀಮಂತರೇ ಹೆಚ್ಚಾಗಿ ಖರೀದಿಸುತ್ತಿದ್ದರು. ಆದರೆ ಇಂದು ಸೇಬುಹಣ್ಣು ವರ್ಷದ ಬಹುತೇಕ ದಿನಗಳಲ್ಲಿ ಜನಸಾಮಾನ್ಯರಿಗೆ ಎಟಕುವಂತ ಬೆಲೆಯಲ್ಲಿ ದೊರಕುತ್ತಿದೆ. ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪೋಷಕಾಂಶಗಳಿರುವ ಕಾರಣ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ಭಾಗ್ಯ ಕರುಣಿಸುವ ಹಣ್ಣಾಗಿದೆ. ಬನ್ನಿ ಇನ್ನಷ್ಟು ಮಾಹಿತಿಯನ್ನು ಮೊಂದಿನ ಸ್ಲೈಡ್ ನಲ್ಲಿ ಓದಿ

Hope it helps you..........

Follow me.......❤❤❤

Similar questions