CBSE BOARD X, asked by kruthikaBU, 4 months ago

akasmikavagi nimma jeevanadalli nadeda ghatane kuritu sambhashane ​

Answers

Answered by phanee19
0

Answer:

nehrjdgdngdnrhndhrmd ugg rjydmehdnj66#&&#-&#-$444;

Explanation:

?!+$++$++737377373$77777+3736+$-$

Answered by manojmanu03032003
1

ನಿಸರ್ಗದ ಜೊತೆ ಬೆರೆತು ಬಾಳಿದರೆ ಪರಿಸರದ ಮೇಲೆ ದುಷ್ಪರಿಣಾಮ ಬೀರುವ, ಅದರ ಉಳಿವಿಗೆ ಪೂರಕವಾಗುವ ವಿಷಯಗಳ ಬಗ್ಗೆ ನಮ್ಮ ಸಾಮಾನ್ಯ ಜ್ಞಾನ ತಾನಾಗಿಯೇ ಬೆಳೆಯುತ್ತದೆ. ಆದರೆ ಇದು ಹೇಳಿದಷ್ಟು ಸುಲಭವಲ್ಲ, ಯಾಕೆಂದರೆ ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ದೆಸೆಯಿಂದ ಇಂದಿನ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಇದರಿಂದ ಹೆಚ್ಚಿನ ಮನುಷ್ಯರು ಪ್ರಕೃತಿಯಿಂದ ವಿಮುಖರಾಗಿ ವಿವಿಧ ಅನೈಸರ್ಗಿಕ ವೃತ್ತಿಗಳಲ್ಲಿ, ಚಟುವಟಿಕೆಗಳಲ್ಲಿ ಕಾಲಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ, ಕೆಲವೊಮ್ಮೆ ಇದು ಮನುಷ್ಯನ ಉದಾಸೀನತೆ, ತಿಳಿಗೇಡಿತನ ಎಂದು ಕಂಡುಬಂದರೆ ಅನೇಕ ಸಲ ಇದರಲ್ಲಿ ಜನಸಾಮಾನ್ಯನ ದೈನಂದಿನ ಆದ್ಯತೆ, ಅನಿವಾರ್ಯತೆ ಹಾಗೂ ಅಸಹಾಯಕತೆಗಳು ಎದ್ದುಕಾಣುತ್ತವೆ. ಹೀಗಿರುವಾಗ ಬಹುಪಾಲು ಜನರಿಗೆ ಇಷ್ಟವಿಲ್ಲದಿದ್ದರೂ ಕೂಡ ನಮ್ಮ ಕಣ್ಣಮುಂದೆಯೂ, ತೆರೆಮರೆಯಲ್ಲಿಯೂ ನಿಸರ್ಗ ಬಸವಳಿಯುತ್ತಾ ಸಾಗುತ್ತಿದೆ, ಈ ಪ್ರಕ್ರಿಯೆಯಲ್ಲಿ ನಾವೆಲ್ಲರೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗೀದಾರರು ಎಂಬುದು ಕೂಡ ನಮಗೆಲ್ಲರಿಗೂ ಈಗ ಚೆನ್ನಾಗಿ ಗೊತ್ತಾಗಿರುವ ಸತ್ಯ. ಈ ಬಗ್ಗೆ ಕಾಳಜಿ, ಚಿಂತೆ ಇರುವವರನ್ನೂ ಗಾಢವಾಗಿ ಕಾಡುತ್ತಿರುವ ಪ್ರಶ್ನೆ ಎಂದರೆ – ಈ ನಿಟ್ಟಿನಲ್ಲಿ ನಾವೇನು ಮಾಡಬಹುದು? ಅಥವಾ ದೊಡ್ಡ ಮಟ್ಟಿಗೆ ಏನೂ ಬದಲಾವಣೆ ತರಲಾರದ ಹತಾಶ ಸ್ಥಿತಿಗೆ ಮಾನವಕುಲ ಸಾಮೂಹಿಕವಾಗಿ ಸಿಲುಕಿಹಾಕಿಕೊಂಡಾಗಿದೆಯೇ?

ಭರವಸೆ, ಕನಸು ಇಲ್ಲದಿದ್ದರೆ, ನಾಳೆ ಇಲ್ಲ. ಮಾನವನು ಕಲ್ಪಿಸಲೂ ಅಸಾಧ್ಯವೆನಿಸಿದ ಅನೇಕ ಸಂಗತಿಗಳನ್ನು ಈಗಾಗಲೇ ಸಾಧಿಸಿ ತೋರಿಸಿದ್ದಾನೆ. ಇಂಥಾದ್ದರಲ್ಲಿ ನಾವೇ ಹುಟ್ಟುಹಾಕಿದ ಸಮಸ್ಯೆಗಳನ್ನು ಮೀರಿ ನಮ್ಮ ಭವಿಷ್ಯವನ್ನು ಸುಭದ್ರಗೊಳಿಸಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ ಇದೆ ಎಂಬ ನಿಲುವಿನೊಂದಿಗೆ ಮುಂದಿನ ಹೆಜ್ಜೆ ಇಡಿ ಎಂದು ನಿಮ್ಮಲ್ಲಿ ನನ್ನ ನಿವೇದನೆ. ನಮ್ಮ ಸುತ್ತಮುತ್ತಲೂ ಏನಿದೆ, ಏನು ನಡೆಯುತ್ತಿದೆ ಎಂಬುದನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಎಚ್ಚರದಿಂದ ಗಮನಿಸಿ ಜಾಗೃತರಾಗುವುದು ಮೊತ್ತಮೊದಲ ಹೆಜ್ಜೆ. ಇವೆಲ್ಲದರಲ್ಲಿ ಪರಿಸರದ ಹಿತಾಸಕ್ತಿಯನ್ನು ಕಾಪಾಡುವ ಅಂಶಗಳನ್ನು ಎತ್ತಿಹಿಡಿದು, ಪರಿಸರವನ್ನು ಕಡೆಗಣಿಸುವ ಅಂಶಗಳನ್ನು ಕೆಳತಳ್ಳುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತೇನೆ ಎಂಬ ಮನೋಭಾವವನ್ನು ಎಲ್ಲರೂ ಮೈಗೂಡಿಸಿಕೊಂಡರೆ ನಿಧಾನವಾಗಿ ಈ ಸಮಸ್ಯೆಗಳು ತೀವ್ರತೆಯನ್ನು ಕಳೆದುಕೊಂಡು ಕೊನೆಗೆ ಇಲ್ಲವಾಗುವವು.

plz mark as brainlist

Similar questions