Sociology, asked by ashok7796, 1 year ago

Alamma prabhu life history in kannada

Answers

Answered by chandanyellow4
0

ಅಲ್ಲಮನ ಜೀವನ ಚರಿತ್ರೆಯನ್ನು ನಿಖರವಾಗಿ ನಿರೂಪಿಸಲು ಸಾಧ್ಯವಾಗಲಾರದೊಷ್ಟು ಐತಿಹ್ಯಗಳು ಆ ವ್ಯಕ್ತಿತ್ವವನ್ನು ಸುತ್ತುವರಿದಿವೆ. ಅಲ್ಲಮನ ಬಗ್ಗೆ ಹದಿಮೂರನೇ ಶತಮಾನದ ಹರಿಹರಮಹಾಕವಿಯು, ಪ್ರಭುದೇವರ ರಗಳೆಯಲ್ಲಿ ಸಾಕಷ್ಟು ವಿವರಣೆಗಳನ್ನು ನೀಡಿರುವನಾದರೂ, ಅಲ್ಲಮನ ಪ್ರಭಾವಲಯದಿಂದ ಪೂರ್ಣವಾಗಿ ಹೊರ ಬಂದು , ಒಂದು ಸಹಜ ಚಿತ್ರಣವನ್ನು ಕೊಡುವಲ್ಲಿ ಹರಿಹರನಂತಹ ವಾಸ್ತವವಾದಿ ಕವಿ ಸಹ ಸೋಲುತ್ತಾನೆ. ಇನ್ನು ಚಾಮರಸನು ಅಲ್ಲಮಪ್ರಭುದೇವನನ್ನು ಈ ಲೋಕದ ಮಾನವ ಚೇತನವೆಂದು ಒಪ್ಪಿಕೊಳ್ಳುವುದೇ ಇಲ್ಲ. ಅವನು ಕೈಲಾಸದಿಂದ ಬಂದ ಶಿವನ ಚಿತ್ಕಳೆ, ಎಂದೇ ಚಿತ್ರಿಸುತ್ತಾನೆ. ಇವರಿಬ್ಬರಲ್ಲದೆ ಎಳಂದೂರು ಹರಿಹರೇಶ್ವರನೆಂಬ ಮತ್ತೊಬ್ಬ ಕವಿಯೂ ಅಲ್ಲಮಪ್ರಭುವಿನ ಬಗ್ಗೆ ಕಾವ್ಯ ರಚನೆ ಮಾಡಿದ್ದಾನೆ. ಇನ್ನು ಚಾಮರಸನು ರಚಿಸಿರುವ ಪ್ರಭುಲಿಂಗಲೀಲೆಯು ತಮಿಳು, ಮರಾಠಿ ಮುಂತಾದ ಭಾಷೆಗಳಿಗೆ ಬಲು ಹಿಂದೆಯೇ ಅನುವಾದಗೊಂಡು ಪ್ರಖ್ಯಾತವಾಗಿದ್ದಿತು .ಈ ಮಹಾಕವಿಗಳಲ್ಲದೆ ,ಅಲ್ಲಮಪ್ರಭುವಿನ ಬಗ್ಗೆ ಪ್ರಾಸಂಗಿಕವಾಗಿ ಬರೆಯದ ವೀರಶೈವ ಸಾಹಿತ್ಯವೇ ಇಲ್ಲವೆನ್ನಬಹುದು. ಇದೆಲ್ಲಕ್ಕಿಂತಲೂ ಮುಖ್ಯವಾಗಿ, ಸ್ವತಃ ಅಲ್ಲಮಪ್ರಭುವೇ ಅತನ ಕಾಲದ ಬಲು ದೊಡ್ಡ ಸಾಹಿತ್ಯಚೇತನವಾಗಿದ್ದನೆನ್ನುವುದು, ಮತ್ತು ಅವನವೇ ಆದ ಅನೇಕ ವಚನಗಳು ಉಪಲಬ್ಧವಿರುವುದು ,ಅವನ ವ್ಯಕ್ತಿತ್ವವನ್ನು ಗ್ರಹಿಸಲು ತುಂಬಾ ಉಪಯುಕ್ತ ಮಾರ್ಗವಾಗಿದೆ .ಇಡಿಯ ವಚನ ಸಾಹಿತ್ಯದಲ್ಲಿಯೇ , ಸಾಹಿತ್ಯದ ಪರಿಭಾಷೆಯನ್ನು ಸರಿಯಾದ ಮಾರ್ಗದಲ್ಲಿ ದುಡಿಸಿಕೊಂಡವರಲ್ಲಿ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಇಬ್ಬರೂ ಅಪ್ರತಿಮರು .

Answered by 9746239965
0

Answer:

Explanation:

ಅಲ್ಲಮನ ಜೀವನ ಚರಿತ್ರೆಯನ್ನು ನಿಖರವಾಗಿ ನಿರೂಪಿಸಲು ಸಾಧ್ಯವಾಗಲಾರದೊಷ್ಟು ಐತಿಹ್ಯಗಳು ಆ ವ್ಯಕ್ತಿತ್ವವನ್ನು ಸುತ್ತುವರಿದಿವೆ. ಅಲ್ಲಮನ ಬಗ್ಗೆ ಹದಿಮೂರನೇ ಶತಮಾನದ ಹರಿಹರಮಹಾಕವಿಯು, ಪ್ರಭುದೇವರ ರಗಳೆಯಲ್ಲಿ ಸಾಕಷ್ಟು ವಿವರಣೆಗಳನ್ನು ನೀಡಿರುವನಾದರೂ, ಅಲ್ಲಮನ ಪ್ರಭಾವಲಯದಿಂದ ಪೂರ್ಣವಾಗಿ ಹೊರ ಬಂದು , ಒಂದು ಸಹಜ ಚಿತ್ರಣವನ್ನು ಕೊಡುವಲ್ಲಿ ಹರಿಹರನಂತಹ ವಾಸ್ತವವಾದಿ ಕವಿ ಸಹ ಸೋಲುತ್ತಾನೆ. ಇನ್ನು ಚಾಮರಸನು ಅಲ್ಲಮಪ್ರಭುದೇವನನ್ನು ಈ ಲೋಕದ ಮಾನವ ಚೇತನವೆಂದು ಒಪ್ಪಿಕೊಳ್ಳುವುದೇ ಇಲ್ಲ. ಅವನು ಕೈಲಾಸದಿಂದ ಬಂದ ಶಿವನ ಚಿತ್ಕಳೆ, ಎಂದೇ ಚಿತ್ರಿಸುತ್ತಾನೆ. ಇವರಿಬ್ಬರಲ್ಲದೆ ಎಳಂದೂರು ಹರಿಹರೇಶ್ವರನೆಂಬ ಮತ್ತೊಬ್ಬ ಕವಿಯೂ ಅಲ್ಲಮಪ್ರಭುವಿನ ಬಗ್ಗೆ ಕಾವ್ಯ ರಚನೆ ಮಾಡಿದ್ದಾನೆ. ಇನ್ನು ಚಾಮರಸನು ರಚಿಸಿರುವ ಪ್ರಭುಲಿಂಗಲೀಲೆಯು ತಮಿಳು, ಮರಾಠಿ ಮುಂತಾದ ಭಾಷೆಗಳಿಗೆ ಬಲು ಹಿಂದೆಯೇ ಅನುವಾದಗೊಂಡು ಪ್ರಖ್ಯಾತವಾಗಿದ್ದಿತು .ಈ ಮಹಾಕವಿಗಳಲ್ಲದೆ ,ಅಲ್ಲಮಪ್ರಭುವಿನ ಬಗ್ಗೆ ಪ್ರಾಸಂಗಿಕವಾಗಿ ಬರೆಯದ ವೀರಶೈವ ಸಾಹಿತ್ಯವೇ ಇಲ್ಲವೆನ್ನಬಹುದು. ಇದೆಲ್ಲಕ್ಕಿಂತಲೂ ಮುಖ್ಯವಾಗಿ, ಸ್ವತಃ ಅಲ್ಲಮಪ್ರಭುವೇ ಅತನ ಕಾಲದ ಬಲು ದೊಡ್ಡ ಸಾಹಿತ್ಯಚೇತನವಾಗಿದ್ದನೆನ್ನುವುದು, ಮತ್ತು ಅವನವೇ ಆದ ಅನೇಕ ವಚನಗಳು ಉಪಲಬ್ಧವಿರುವುದು ,ಅವನ ವ್ಯಕ್ತಿತ್ವವನ್ನು ಗ್ರಹಿಸಲು ತುಂಬಾ ಉಪಯುಕ್ತ ಮಾರ್ಗವಾಗಿದೆ .ಇಡಿಯ ವಚನ ಸಾಹಿತ್ಯದಲ್ಲಿಯೇ , ಸಾಹಿತ್ಯದ ಪರಿಭಾಷೆಯನ್ನು ಸರಿಯಾದ ಮಾರ್ಗದಲ್ಲಿ ದುಡಿಸಿಕೊಂಡವರಲ್ಲಿ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಇಬ್ಬರೂ ಅಪ್ರತಿಮರು .

Read more on Brainly.in - https://brainly.in/question/7258906#readmore

Similar questions