M
ಶಾಲಾಭಿವೃದ್ಧಿಯಲ್ಲಿ ಜನಪ್ರತಿನಿಧಿಗಳ ಪಾತ್ರ .
Answers
Explanation:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ ವಿಚಾರ ಜನಪ್ರತಿನಿಧಿಗಳ ತೀರ್ಮಾನ ಆಗಬಾರದು. ಯಾರೂ ಕೂಡ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡಬೇಡಿ. ಯಾವ ಜನಪ್ರತಿನಿಧಿಯೂ ಚುನಾವಣೆ ವೇಳೆ ಶಿಕ್ಷಣದ ಬಗ್ಗೆ ಚರ್ಚೆಯೇ ಮಾಡುವುದಿಲ್ಲ. ಎಲ್ಲ ಜನಪ್ರತಿನಿಧಿಗಳಿಗೂ ಶಿಕ್ಷಣದ ಬಗ್ಗೆ ಎಲ್ಲ ಮಾಹಿತಿಯೂ ಇರುವುದಿಲ್ಲ. ಹಾಗಾಗಿ ಅವರ ಸಲಹೆಯಿಂದ ಶಾಲೆ ಆರಂಭ ಮಾಡುವ ನಿರ್ಧಾರ ಸರಿಯಲ್ಲ ಎಂದರು.
ಶಾಲೆಯ ಆರಂಭದ ಬಗ್ಗೆ ಮೊದಲು ತೆಗೆದುಕೊಳ್ಳಬೇಕಾದ ಕ್ರಮವನ್ನು ಸ್ಪಷ್ಟಪಡಿಸಬೇಕು. ಎಲ್ಲವನ್ನು ಜನಪ್ರತಿನಿಧಿಗಳ ಮೇಲೆ ಹಾಕಬೇಡಿ. ಶಿಕ್ಷಣ ಸಚಿವರಾಗಿ ಶಾಲೆ ಆರಂಭಕ್ಕೆ ಮಾಡಿಕೊಂಡಿರುವ ಸಿದ್ದತೆ ಬಗ್ಗೆ ಮೊದಲು ತಿಳಿಸಿ. ಸುಮ್ಮನೆ ಒಂದು ಕಾಗದ ಬರೆದು ಕುಳಿತುಕೊಂಡರೆ ಅದು ಸರಿಯಲ್ಲ. ಮಕ್ಕಳು ಹಾಗೂ ಪೋಷಕರ ಮನಸ್ಸಿನ ಮೇಲೆ ಚೆಲ್ಲಾಟ ಸರಿಯಾದ ನಿಲುವಲ್ಲ ಎಂದರು.
ಸುರೇಶ್ ಕುಮಾರ್ ಸರ್ಕಾರಿ ಶಾಲೆ ಜೊತೆಗೆ ಖಾಸಗಿ ಶಾಲೆ ಬಗ್ಗೆಯೂ ಯೋಚನೆ ಮಾಡಬೇಕು. ಎಲ್ಲವನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಿ ಎಂದು ಸಚಿವ ಸುರೇಶ್ ಕುಮಾರ್ಗೆ ಎಚ್. ವಿಶ್ವನಾಥ್ ಕಿವಿಮಾತು ಹೇಳಿದರು