Parisara smraskhane essay in kannada
Answers
Answered by
1
Answer:
ನಿಸರ್ಗದ ಜೊತೆ ಸಮಾನ್ಯ ಜೀವಿಯಂತೆ ಬೆರೆತು ಬಾಳಬೇಕಾದ ಮಾನವ ಅಭಿವೃದ್ದಿ ಎನ್ನುವ ಮಾನದಂಡದಿಂದ ಸಂಪೂರ್ಣ ಕುರುಡಾಗಿದ್ದಾನೆ. ತನ್ನ ಸ್ವಾರ್ಥ ಬದುಕಿಗಾಗಿ ಇಂದು ಪರಿಸರ ನಾಶಮಾಡುತ್ತಿರುವುದರಿಂದ ವನ್ಯ ಜೀವಸಂಕುಲಗಳ ನಾಶ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನುಷ್ಯ ತಾನು ಸಕಲ ಜೀವ ಸಂಕುಲಗಳಂತೆ ಒಂದು ಜೀವಿ ಎನ್ನುವುದನ್ನು ಮರೆತು ಇಡೀ ಜೀವ ಸಂಕುಲ, ಅರಣ್ಯ ಸಂಪತ್ತನ್ನು ನಾಶ ಮಾಡಲು ಹೊರಟಿದ್ದಾನೆ. ನೈಸರ್ಗಿಕ ಪ್ರದೇಶಗಳನ್ನು ಹಾಗೂ ಅಳಿವಿನಂಚಿನಲ್ಲಿರುವ ಜೀವ ಸಂಕುಲವನ್ನು ರಕ್ಷಿಸಿ ಉಳಿಸಬೇಕಾದ ಮನುಷ್ಯನೇ ಇಂದು ಅಧಿಕಾರ ಮತ್ತು ಸಂಪತ್ತಿನ ಆಸೆ ಆಮಿಷಗಳಿಗೆ ಬಲಿಯಾಗಿ ಪರಿಸರ ನಾಶಕ್ಕೆ ಮುಂದಾಗಿರುವುದು ದುರಾದೃಷ್ಟಕರ ಸಂಗತಿ.
Similar questions