Social Sciences, asked by suvosarkar8899, 1 year ago

Swachata andolan in kannada

Answers

Answered by saitejassb
8
ಈ ಅಭಿಯಾನವು  ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಗೆ ಮುನ್ನ ತನ್ನ ಗುರಿ ತಲುಪುವ ಧ್ಯೇಯ ಹೊಂದಿದೆ. ಮೂಲ ಉದ್ದೇಶ :[citation needed]

ಬಯಲು ಶೌಚ ನಿರ್ಮೂಲನೆ

ಮಲ ಹೊರುವ ಪದ್ಧತಿಯ ಸಂಪೂರ್ಣ ನಿರ್ಮೂಲನೆ.

,1೦೦% ಘನತ್ಯಾಜ್ಯಗಳ ನಿರ್ವಹಣೆ/ಮರುಬಳಕೆ/ಸಂಸ್ಕರಣೆ 

ಸಾರ್ವಜನಿಕರಲ್ಲಿ ನಿರ್ಮಲೀಕರಣಕ್ಕಾಗಿ ಮಾನಸಿಕ  ಬದಲಾವಣೆ

ಸಂಪೂರ್ಣ ಕೊಳಗೇರಿ ನಿರ್ಮೂಲನೆ.

ಸಾರ್ವಜನಿಕರಲ್ಲಿ ನಿರ್ಮಲೀಕರಣ ಮತ್ತು ಸಾಮಾಜಿಕ ಸ್ವಾಸ್ಥ್ಯದ ನಡುವಿರುವ ಸಂಬಂಧದ ಬಗ್ಗೆ ಜನಜಾಗೃತಿ ಮೂಡಿಸುವುದು ಹಾಗೂ ಇತರೆ

ಸ್ವಚ್ಛ ಭಾರತ ಅಭಿಯಾನದ ಪ್ರಾರಂಭ

ಅಕ್ಟೋಬರ್ ೨ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ನರೇಂದ್ರ ಮೋದಿ­ಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ, ಸ್ವಚ್ಛ ಭಾರತ ಅಭಿಯಾನ­ಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವ­­ಜನಿಕ ಪ್ರದೇಶಗಳಲ್ಲಿ ಕೊಳೆ, ಕಸ­ಗಳನ್ನು ನೋಡಿ ತಾವೇನೂ ಮಾಡ­ಲಾ­ಗದೇ, ಅವು­ಗಳಿಗೆ ಅನಿವಾರ್ಯವಾಗಿ ಹೊಂದಿ­ಕೊಂಡಂತಿದ್ದ ಬಹ­ಳಷ್ಟು ಜನರಲ್ಲಿ ಆಶಾ­ಭಾವನೆಗಳು ಚಿಗುರೊಡೆದಿವೆ.

ಮೋದಿಯವರು ಸಾರ್ವ­ಜನಿಕರಿಗೆ ತಮ್ಮ ಪ್ರದೇಶ­­ಗಳನ್ನು ಸ್ವಚ್ಛವಾಗಿ­ಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್‌ ತೆಂಡೂಲ್ಕರ್‌­ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶ­ವನ್ನು ಸ್ವಚ್ಛ­ಗೊಳಿ­ಸುವುದು ಹಾಗೂ ಇನ್ನಿತ­ರ­ರಿಗೂ ಅದೇ ರೀತಿ ಮಾಡು­ವಂತೆ ಕರೆ ನೀಡುವ ಮೂಲಕ ಅಭಿ­ಯಾನಕ್ಕೆ ಕೈಜೋಡಿಸಲು ಆಹ್ವಾನಿ­ಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.

ಹೆಚ್ಚಿನವರು ಸಾರ್ವ­ಜನಿಕ­­ವಾಗಿಯೂ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತ­ಪಡಿ­ಸುತ್ತಿದ್ದಾರೆ. ಸ್ವತಃ ಪ್ರಧಾನಿ­ಯವರ ಒತ್ತಾಸೆ, ಇತರ ಪ್ರಮುಖರ ಹಾಗೂ ಸರ್ಕಾ­ರೇತರ ಸಂಸ್ಥೆ­ಗಳ ಬೆಂಬಲ, ಸಾರ್ವಜನಿಕರ ಸಹ­ಭಾಗಿತ್ವ, ಜಾಲತಾಣ, ಮಾಧ್ಯಮಗಳ ಮೂಲಕ ಸ್ವಚ್ಛ­ತೆಯ ವಿಷಯದ ಕುರಿತ ಪ್ರಚಾರ.

Similar questions